‘ಕೃಷ್ಣ ರುಕ್ಕು’ ಸೀರಿಯಲ್‌ ಮೂಲಕ ಮೋಡಿ ಮಾಡೋಕೆ ರೆಡಿಯಾದ್ರು ಮೌನ, ಅಕ್ಷಯ್‌

‘ಕೃಷ್ಣ ರುಕ್ಕು’ ಸೀರಿಯಲ್‌ ಮೂಲಕ ಮೋಡಿ ಮಾಡೋಕೆ ರೆಡಿಯಾದ್ರು ಮೌನ, ಅಕ್ಷಯ್‌

ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?-  ಬರುತ್ತಿದೆ ಹೊಸ ಧಾರಾವಾಹಿ ‘ಕೃಷ್ಣ ರುಕ್ಕು’ 

ದಾ ಹೊಸತನದೊಂದಿಗೆ ವೀಕ್ಷಕರನ್ನು ಮನರಂಜಿಸಿ ನಂ.1 ಸ್ಥಾನ ಪಡೆದಿರುವ Zee ಕನ್ನಡ 2026 ಶುರುವಿಗೆ ಮತ್ತೊಂದು ಸರ್ಪ್ರೈಸ್ ನೀಡಲು ಸಜ್ಜಾಗಿದೆ. ಪ್ರೀತಿ, ಪ್ರತೀಕಾರ ಮತ್ತು ವಿಧಿಯಾಟದ ಸುತ್ತ ನಡೆಯುವ ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’ ಇದೇ ಮಾರ್ಚ್ 9 ರಿಂದ 6:30 ಕ್ಕೆ ಜೀ಼ ಕನ್ನಡದಲ್ಲಿ.
ಕುಟುಂಬದ ಒಗ್ಗಟ್ಟು, ಜವಾಬ್ದಾರಿ, ಪ್ರೀತಿ ಜೊತೆಗೆ ಅನಿರೀಕ್ಷಿತ ತಿರುವುಗಳು ಕೂಡ ಕೃಷ್ಣ-ರುಕ್ಕು ಧಾರಾವಾಹಿಯಲ್ಲಿ ಕಾಣಸಿಗಲಿದೆ.

ಅಣ್ಣನ ಅಕಾಲಿಕ ನಿಧನದ ನಂತರ ತನ್ನ ಇಡೀ ಕುಟುಂಬದ ಜವಾಬ್ದಾರಿಯನ್ನು ತನ್ನ ಹೆಗಲಮೇಲೆ ಹಾಕಿಕೊಂಡ ರುಕ್ಕು ಏನೆಲ್ಲಾ ಸವಾಲುಗಳನ್ನು ಎದುರಿಸುತ್ತಾಳೆ ಎಂಬುದನ್ನು ಇಲ್ಲಿ ಸುಂದರವಾಗಿ ತೋರಿಸಲಾಗಿದೆ. ಪ್ರೀತಿ, ದ್ವೇಷ ಮತ್ತು ವಿಧಿಯಾಟದ ನಡುವೆ ಕೃಷ್ಣ-ರುಕ್ಕುವಿನ ಜೀವನ ಹೀಗೆ ಸಾಗಲಿದೆ ಎನ್ನುವುದು ಈ ಧಾರಾವಾಹಿಯ ಮತ್ತೊಂದು ಕುತೂಹಲಕಾರಿ ಅಂಶ. ಮೌನ ಗುಡ್ಡೇಮನೆ ರುಕ್ಕು ಆಗಿ ನಟಿಸಿದರೆ, ಅಕ್ಷಯ್ ನಾಯಕ್ ಕೃಷ್ಣನ ಪಾತ್ರ ನಿರ್ವಹಿಸಲಿದ್ದಾರೆ. ಅಷ್ಟೇ ಅಲ್ಲದೇ ಹಿರಿತೆರೆ ಕಿರುತೆರೆಯ ನಿರ್ದೇಶಕ, ನಿರ್ಮಾಪಕ , ಬರಹಗಾರ , ನಟ, ಕಲಾ ಸಾಮ್ರಾಟ್ ಎಸ್.ನಾರಾಯಣ್ ಸೂರ್ಯ ಪ್ರಕಾಶ್ ಎಂಬ ಮಹತ್ವದ ಪಾತ್ರ ನಿರ್ವಹಿಸುವ ಮೂಲಕ ತಂಡಕ್ಕೆ ಬಲ ನೀಡಿದ್ದಾರೆ.

 

View this post on Instagram

 

A post shared by Zee Kannada (@zeekannada)

ಹಲವು ವರ್ಷಗಳ ನಂತರ ಕನ್ನಡ ಕಿರುತೆರೆಗೆ ಕಮ್ ಬ್ಯಾಕ್ ಆಗಿದ್ದಾರೆ ಖ್ಯಾತ ನಟಿ ಸುಚಿತ್ರ, ಗಾಯಕ ನವೀನ ಸಜ್ಜು ಹೀಗೆ ಮುಂತಾದ ಅತ್ಯದ್ಭುತ ಕಲಾವಿದರುಗಳು ನಟಿಸಿರುವುದು ಈ ಧಾರಾವಾಹಿಯ ತೂಕವನ್ನು ಹೆಚ್ಚಿಸುತ್ತದೆ. ಧೃತಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲೀಪ್ ರಾಜ್ ಹಾಗೂ ಶ್ರೀ ವಿದ್ಯಾ ನಿರ್ಮಿಸಿರುವ ಕೃಷ್ಣ ರುಕ್ಕು ಧಾರಾವಾಹಿಯಲ್ಲಿ ಮನಸೆಳೆಯುವ ಕಥೆ ಮತ್ತು ಭಾವನಾತ್ಮಕ ಅಭಿನಯಗಳು ಪ್ರೇಕ್ಷಕರಿಗೆ ಕಾಣಸಿಗಲಿದೆ.

ಕೃಷ್ಣ-ರುಕ್ಕು ಧಾರಾವಾಹಿ ಬಗ್ಗೆ ಮಾತನಾಡಿದ ಜೀ಼ ಕನ್ನಡ ವಾಹಿನಿಯ ಚೀಫ್ ಚಾನೆಲ್ ಆಫೀಸರ್ ದೀಪಕ್ ಶ್ರೀರಾಮುಲು ಅವರು ” ಜೀ ಕನ್ನಡ ವಾಹಿನಿ ಯಾವಾಗಲೂ ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಗುವ ನೈಜ ಭಾವನೆಗಳು ಮತ್ತು ಕೌಟುಂಬಿಕ ಮೌಲ್ಯಗಳನ್ನೊಳಗೊಂಡ ಕಥೆಗಳನ್ನು ವೀಕ್ಷಕರಿಗೆ ತಲುಪಿಸಲು ಇಚ್ಚಿಸುತ್ತದೆ. ‘ಕೃಷ್ಣ ರುಕ್ಕು’ ಧಾರಾವಾಹಿಯು ಪ್ರೀತಿ, ಜವಾಬ್ದಾರಿ ಮತ್ತು ವಿಧಿಯಾಟದ ಸುತ್ತ ನಡೆಯುವ ಒಂದು ಸುಂದರವಾದ ಕಥೆಯಾಗಿದೆ.

 

View this post on Instagram

 

A post shared by Zee Kannada (@zeekannada)

ಈ ಧಾರಾವಾಹಿಯಲ್ಲಿನ ವೈವಿಧ್ಯಮಯ ಪಾತ್ರಗಳು ಮತ್ತು ಕುತೂಹಲಕಾರಿ ಕಥೆಯು ವೀಕ್ಷಕರ ಮನಸ್ಸನ್ನು ಗೆಲ್ಲುವುದಲ್ಲದೆ, ನಮ್ಮ ಕಾರ್ಯಕ್ರಮಗಳನ್ನು ಇನ್ನಷ್ಟು ಬಲಪಡಿಸಲಿದೆ ಎಂಬ ನಂಬಿಕೆ ನಮಗಿದೆ ಎಂದರು. ಪ್ರೀತಿ, ಸೇಡು ಮತ್ತು ವಿಧಿ, ಗೆಲುವು ಯಾವುದಕ್ಕೆ? ತಿಳ್ಕೊಳೋಕೆ ವೀಕ್ಷಿಸಿ ಇದೇ ಮಾರ್ಚ್ 9 ರಿಂದ ಸಂಜೆ 6:30 ಕ್ಕೆ, ಜೀ಼ ಕನ್ನಡ ವಾಹಿನಿಯಲ್ಲಿ ‘ಕೃಷ್ಣ ರುಕ್ಕು’.

News Desk Sandalwood Times

error: Content is protected !!